ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಬಾಲ ಸಾಹೇಬ್ ಕೃಷ್ಣ ದೇಸಾಯಿ(48) ಎಂಬುವವರು ಮೃತಪಟ್ಟಿದ್ದಾರೆ. ಹಾಗು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಇದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ.
ಭೀಕರ ರಸ್ತೆ ಅಪಘಾತ -ಓರ್ವ ಸಾವು, ಮೂವರಿಗೆ ಗಂಭೀರ ಗಾಯ.
C News TV Kannada News Online in cnewstv