ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದರು. ಇಂದು ಬೆಳಿಗ್ಗೆ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಂಜಿಮ್ ನ ಬಿಜೆಪಿ ಕಚೇರಿಯಲ್ಲಿ 1 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಕಲಾ ಅಕಾಡೆಮಿ ಗೆ ತೆಗೆದುಕೊಂಡು ಹೋಗಲಾಯಿತು.
ಇಂದು ಸಂಜೆ ಪಣಜಿಯ ವೀರಾಮನ್ ಬೀಚ್ ಸಮೀಪ ಮನೋಹರ್ ಪರಿಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಪುತ್ರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಿತು..
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ನೂರಾರು ಅಭಿಮಾನಿಗಳು ರಾಜಕೀಯ ಪ್ರಮುಖರು ಕಾರ್ಯಕರ್ತರು ಪರಿಕ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
C News TV Kannada News Online in cnewstv