ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಶಿಕಾರಿಪುರ ತಾಲೂಕಿನ ನೇರಲಗಿ ಗ್ರಾಮದಲ್ಲಿ ಪ್ರಚಾರ ಸಭೆ ನಡೆಸಿದರು. ನೇರಲಗಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಇಂದಿನ ಪ್ರಚಾರ ಆರಂಭಿಸಿದರು. ಪೂಜೆ ಬಳಿಕ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆದ ಶಿರಾಳಕೊಪ್ಪ, ತೋಗರ್ಸಿ, ಹಾಗೂ ಸುಣ್ಣದಕೊಪ್ಪ ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾತನಾಡಿದ ರಾಘವೇಂದ್ರ ಅವರು ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿಸಲು ಸಂಕಲ್ಪ ಮಾಡಿದರು.
C News TV Kannada News Online in cnewstv