Breaking News

ಬಿಜೆಪಿಗೆ ಡಿಕೆಶಿ ಶಾಕ್ – ಒಂದಾದ ಅಪ್ಪಾಜಿ ಗೌಡ ಸಂಗಮೇಶ್

 

ಶಿವಮೊಗ್ಗ ಜಿಲ್ಲೆ ಭದ್ರಾವತಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ರಾಜಕೀಯದಲ್ಲಿ ಬದ್ಧ ವೈರಿಗಳಾಗಿದ್ದ ಜೆಡಿಎಸ್ ಮುಖಂಡ ಮಾಜಿ ಶಾಸಕ ಅಪ್ಪಾಜಿಗೌಡ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಸಂಗಮೇಶ್ ಇಬ್ಬರನ್ನು ಕೂಡ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಒಂದುಗೂಡಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಏಕೆಂದರೆ ಬಿಜೆಪಿಯು ಅತಿ ಹೆಚ್ಚು ಮತಗಳ ನಿರೀಕ್ಷೆಯನ್ನು ಭದ್ರಾವತಿ ಕ್ಷೇತ್ರದಿಂದ ಹೊಂದಿತ್ತು.‌

ಇದೇ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮೈತ್ರಿ ಧರ್ಮ ಪಾಲನೆಗಾಗಿ ಇಬ್ಬರು ನಾಯಕರು ಒಂದಾಗಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಗೆಲುವಿಗೆ ಇವರಿಬ್ಬರೂ ಸಹ ಇನ್ನು ಮುಂದೆ ಒಟ್ಟಾಗಿಯೇ ಪ್ರಚಾರ ಮಾಡಲಿದ್ದಾರೆ. ಮಧು ಬಂಗಾರಪ್ಪನವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು..

Leave a Reply

Your email address will not be published. Required fields are marked *

*