ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಿಎಂಟಿಸಿಯ 25 ಪಿಂಕ್ ಸಾರಥಿ ವಾಹನಗಳಿಗೆ ಚಾಲನೆ ನೀಡಿದರು. ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ಪಿಂಕ್ ಸಾರಥಿ ವಾಹನಗಳನ್ನ ನಗರದಲ್ಲಿ ಪ್ರಾರಂಭಿಸಲಾಗಿದೆ. ಇವು ಬಿಎಂಟಿಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಗಸ್ತು ತಿರುಗಲಿದ್ದಾವೆ. ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಈ ವಾಹನಗಳು ಹೆಚ್ಚಿನ ಒತ್ತು ನೀಡಲಿದೆ. ಇನ್ನೂ ಪಿಂಕ್ ಸಾರಥಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಹ್ಯಾರಿಸ್, ಬಿಎಂಟಿಸಿ ಎಂಡಿ ಎನ್.ವಿ.ಪ್ರಸಾದ್, ಭದ್ರತೆ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಅನುಪಮ್ ಅಗರವಾಲ್ ಭಾಗಿಯಾಗಿದ್ದರು.
C News TV Kannada News Online in cnewstv