ಭಾರತ ಕ್ರಿಕೆಟ್ ತಂಡಕ್ಕೆ ತೀವ್ರ ಆಘಾತ : ಶಿಖರ್ ಧವನ್ ವಿಶ್ವಕಪ್ ನಿಂದ ಹೊರ ಉಳಿಯಬಹುದು
ಗಾಯಾಳುವಾಗಿರುವ ಆರಂಭಿಕ ಆಟಗಾರ ಶಿಖರ್ ಧವನ್ ಅವರು ವಿಶ್ವಕಪ್ ನಿಂದ ಹೊರ ನಡೆಯಬೇಕಾಗಿದೆ ಎಂದು ಸುದ್ದಿ ಎಲ್ಲಾ ಕಡೆ ವೈರಲ್ ಅಗತ್ತಿದೆ. ಅದರೆ ಬಿಸಿಸಿಐ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ.
ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಶಿಖರ್ ಧವನ್ ಅವರಿಗೆ ಮೂರು ವಾರಗಳ ಕಾಲ ವಿಶ್ರಾಂತಿ ಅಗತ್ಯ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿತ್ತು. ಇದಾದ ಬಳಿಕ ಬಂದ ವರದಿ ಪರಿಶೀಲಿಸಿದ ವೈದ್ಯರು, ಧವನ್ ಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ..
ಶಿಖರ್ ಧವನ್ ಅವರು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತಕ್ಕೆ ಪ್ರಮುಖ ಆಟಗಾರರಾಗಿದ್ದಾರೆ, ಅಲ್ಲಿ ಅವರಿಗೆ 6 ಶತಕಗಳಿವೆ. 2015 ರ ವಿಶ್ವಕಪ್ನಲ್ಲಿ ಧವನ್ 2 ಶತಕಗಳನ್ನು ಬಾರಿಸಿದರು.
2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಳಪೆ ಆರಂಭದ ನಂತರ ಧವನ್ 117 ರನ್ ಗಳಿಸಿ ಭಾರತಕ್ಕೆ 36 ರನ್ಗಳ ಜಯ ಸಾಧಿಸಿದರು.
Recent Comments