Breaking News

ವಿದ್ಯಾರ್ಥಿನಿಯ ಬರ್ಭರ ಹತ್ಯೆ.

ವಿದ್ಯಾರ್ಥಿನಿಯ ಬರ್ಭರ ಹತ್ಯೆ
ಶಿವಮೊಗ್ಗ: ಮನೆಯಲ್ಲಿಯೇ ವಿದ್ಯಾರ್ಥಿನಿಯ ಕತ್ತನ್ನು ಕೊಯ್ದು ಬರ್ಭರವಾಗಿ ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಕಾಳಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಇಂದಿರಾ(17) ಕೊಲೆಯಾದ ವಿದ್ಯಾರ್ಥಿನಿ. ತಂದೆಯನ್ನು ಕಳೆದುಕೊಂಡಿದ್ದ ಇಂದಿರಾ‌ ಕಾಳಿಂಗಹಳ್ಳಿಯಲ್ಲಿರುವ ತನ್ನ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದಿರಾಳ ಚಿಕ್ಕಪ್ಪ ಚಿಕ್ಕಮ್ಮ ಇಬ್ಬರೂ ಮೂಗರಾಗಿದ್ದು ಇವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಇಂದಿರಾಳ ಕತ್ತುಕೊಯ್ದು ಬರ್ಭರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ‌‌ಎಸ್.ಪಿ.ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

*