ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.
ಶಿವಮೊಗ್ಗ: ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿ ರಸ್ತೆ ಕುಸಿಯುವ ಭೀತಿ ಇರುವುದರಿಂದ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. 12 ಟನ್ ಗಿಂತಲೂ ಹೆಚ್ಚು ತೂಕದ ವಾಹನಗಳು ಮಳೆಗಾಲ ಮುಗಿಯುವವರೆಗೂ ಈ ಮಾರ್ಗದಲ್ಲಿ ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಇನ್ನುಳಿದಂತೆ ಮಿನಿಬಸ್, ಕಾರು, ಜೀಪ್, ಬೈಕ್ ಗಳ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

Contact for news and advertisement
99166 60399
C News TV Kannada News Online in cnewstv