
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬುಧವಾರ ಸಂಜೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.
ಮೆಗ್ಗಾನ್ ಆಸ್ಪತ್ರೆಯ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ದಿನನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು..
Contact for Advertisement : 7676236690 
C News TV Kannada News Online in cnewstv