ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಗೆ ಸಿದ್ಧವಾದ ರಕ್ಷಣಾ ಇಲಾಖೆ

ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ.

700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ತಹಶೀಲ್ದಾರ್ ನೇತೃತ್ವದಲ್ಲಿ ನಡೆದಿದೆ ಎಂದರು.

ನಗರದ ಹೊರಭಾಗದಲ್ಲೂ ವಾಹನ ತಪಾಸಣೆ ನಡೆಸಲಾಗಿದೆ. ಇಂದು ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಲಾಗುವುದು ಎಂದರು.

Leave a Reply

Your email address will not be published. Required fields are marked *

*