Breaking News

ಸರ್ಕಾರದಲ್ಲಿ ಸಿಎಂ ಪುತ್ರರ ಹಸ್ತಕ್ಷೇಪ ನಿರಾಕರಿಸಿದ ಬಿವೈಆರ್.

ಶಿವಮೊಗ್ಗ: ಸಿಎಂ ಯಡಿಯೂರಪ್ಪ ಅವರ ಸರ್ಕಾರದಲ್ಲಿ ತಮ್ಮ ಹಸ್ತಕ್ಷೇಪದ ಆರೋಪವನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನಿರಾಕರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರ ಪುತ್ರನಾದರೂ ನಾನೊಬ್ಬ ಜನಪ್ರತಿನಿಧಿ. ಹಾಗೆಯೇ ವಿಜಯೇಂದ್ರ ಬಿಜೆಪಿ ಕಾರ್ಯಕರ್ತನಾಗಿ ದ್ದರಿಂದ ಸಹಜವಾಗಿಯೇ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತೇವೆ ಅಷ್ಟೇ…. ಅಷ್ಟೇ ಹೊರತು ಪಡಿಸಿ ಅಧಿಕಾರ ದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಸುಪ್ರೀಂ ಕೋರ್ಟ್ ನಲ್ಲಿಂದು ಬಿಎಸ್ವೈ ಆಸ್ತಿ ದುಪ್ಪಟ್ಟು ಪ್ರಕರಣದ ಅರ್ಜಿ ವಿಚಾರಣೆ ವಿಚಾರ ನಡೆಯುತ್ತಿದ್ದು, ಕಾನೂನು ತನ್ನ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಸಂಸದ ನಾರಾಯಣ ಸ್ವಾಮಿ ಯನ್ನು ದಲಿತ ಎಂಬ ಕಾರಣಕ್ಕೆ ಗ್ರಾಮಕ್ಕೆ ಸೇರಿಸದ ವಿಷಯದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಆದರೆ ಇಂತಹ ಘಟನೆ ನಡೆಯಬಾರದು. ಇದು ಯಾರು ಮಾಡಿದರೂ ತಪ್ಪೆ ಎಂದ ಸಂಸದರು, ಸಂಚಾರಿ ನಿಯಮ ಉಲ್ಲಂಘನೆ ದಂಡದ ಪ್ರಮಾಣ ರಾಜ್ಯ ಸರ್ಕಾರ ಕಡಿತಗೊಳಿಸಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

*