Breaking News

ಸಿಗಂದೂರು ಬಳಿ ಲಾಂಚ್ ನಿಂದ ಶರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ- Exclusive video

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನಲ್ಲಿ‌ ಸಂಚರಿಸುವ ಲಾಂಚ್ ನಿಂದ ನೀರಿಗೆ ಹಾರಿ ಅಪರಿಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಂಚ್ ಅಂಬಾರಗೋಡ್ಲು ಕಡೆಯಿಂದ ಕಳಸವಳ್ಳಿಗೆ ಹೋಗುವಾಗ ಹಿನ್ನೀರಿನ ಮಧ್ಯೆ ಅಪರಿಚಿತ ವ್ಯಕ್ತಿ ಏಕಾಏಕಿ ನೀರಿಗೆ ಧುಮುಕಿದ್ದಾನೆ. ಲಾಂಚ್ ನ ಸಿಬ್ಬಂದಿ ಆತನನ್ನು ರಕ್ಷಿಸಲು ಪ್ರಯತ್ನಸಿದರಾದರೂ ಅಷ್ಟರಲ್ಲಾಗಲೇ ಆತ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದಾನೆ. ಮೃತನ ಶವಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌..

 

Leave a Reply

Your email address will not be published. Required fields are marked *

*