Breaking News

ಪ್ಲಾಸ್ಟಿಕ್ ಮುಕ್ತ ಆಂದೋಲನದ ಮೂಲಕ ಗಾಂಧಿ ಜಯಂತಿ ಆಚರಣೆ..

ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಪಿ.ವಿ.ಸಿಂಧು ಶಟಲ್‌ ಬಳಗ ಹಾಗೂ ಗ್ರೋ ಗ್ರೀನ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯನ್ನು ಚಂದನ ಪಾರ್ಕ್ ನಲ್ಲಿ ಆಚರಿಸಲಾಯಿತು.. ಬಳಿಕ ಬಡಾವಣೆಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮಾದಾನ ಮಾಡಿದರು. ಇದಾದ ನಂತರದಲ್ಲಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ಗಳನ್ನು ವಿತರಣೆ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ಆಂದೋಲನಕ್ಕೆ ಬೆಂಬಲ ಸೂಚಿಸಿದರು..ಈ ಸಂದರ್ಭದಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಕಾಟನ್ ಬ್ಯಾಗ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿ.ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಂಪೂರ್ಣ ಸಹಕರಿಸಿ ಬಡಾವಣೆಯ ನಿವಾಸಿಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿ. ಮನೆ ಮನೆಗೆ ಬಟ್ಟೆ ಬ್ಯಾಗ್ ಗಳನ್ನು ವಿತರಿಸಲಾಯಿತು ..

 

Leave a Reply

Your email address will not be published. Required fields are marked *

*