Breaking News

ತೀರ್ಥಹಳ್ಳಿ ದಸರಾ ಮೆವಣಿಗೆಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಬರುತ್ತಿದ್ದ ವೃದ್ದರೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ‌ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಸಂಜೀವ್ ಶೆಟ್ಟಿ(62) ಮೃತಪಟ್ಟವರು. ದಸರಾ ಮೆರವಣಿಗೆಯಲ್ಲಿ‌ ಭಾಗಿಯಾಗಿದ್ದ ಇವರು ಎಲ್ಲರಂತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದರು. ಆದರೆ‌ ಇದೇ ವೇಳೆ ಅಸ್ವಸ್ಥಗೊಂಡು ಸಂಜೀವ ಶೆಟ್ಟಿ ಕುಸಿದು ಬಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ನೀರು ಕುಡಿಸಿ ಉಪಚರಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಸಂಜೀವ ಶೆಟ್ಟಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

*