ಶಿವಮೊಗ್ಗ: ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಗಳ ಒಳಗೆ ನೀರು ನುಗ್ಗಿರುವ ಘಟನೆ ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿ ನಡೆದಿದೆ. ಭಾರಿ ಮಳೆ ಸುರಿದಿದ್ದರಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಆದರೆ ಇದೇ ಭಾಗದಲ್ಲಿ ಚರಂಡಿಗಳು ಹಾಗೂ ರಾಜಕಾಲುವೆಗಳನ್ನು ಕೆಲವರು ಬಂದ್ ಮಾಡಿದ್ದರಿಂದಾಗಿ ನೀರು ಹಳೆಮಂಡ್ಲಿಯ ತಗ್ಗು ಪ್ರದೇಶದಲ್ಲಿರುವ ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ವಿಷಯ ತಿಳಿದ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಹಾಗೂ ಪಾಲಿಕೆ ಅಧಿಕಾರಿಗಳು ಜೆಸಿಬಿ ಮೂಲಕ ರಾಜಕಾಲುವೆಗಳನ್ನು ತೆರವುಗೊಳಿಸುವ ಮೂಲಕ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಿದರು. ನೀರು ಹಳೆಮಂಡ್ಲಿಯ ಮನೆಗಳಿಗೆ ನುಗ್ಗಿದ್ದು ಮಾತ್ರವಲ್ಲದೆ ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿಯ ಮೇಲೂ ನಿಂತಿದ್ದರಿಂದಾಗಿ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು.
C News TV Kannada News Online in cnewstv