Breaking News

ತುಂಗಾ ನದಿಗೆ ಹಾರಿ ಆಹಾರ ನಿರೀಕ್ಷಕ ಆತ್ಮಹತ್ಯೆ. 

ಶಿವಮೊಗ್ಗ : ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಐ.ಡಿ.ದತ್ತಾತ್ರೇಯ ಶನಿವಾರ ಬೆಳಿಗ್ಗೆ ಮಂಡಗದ್ದೆ ಸಮೀಪದ ಮುಡುಬಾ ಬಳಿ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಡಾರೆ. ಘಟನೆ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫುಡ್ ಇನ್ಸಪೆಕ್ಟರ್ ದತ್ತಾತ್ರೇಯಾ ಈ ಮುನ್ನ ತಾಲೂಕಿನ ನಗರದಲ್ಲಿ ವಿಎ ಆಗಿ ಆರ್.ಐ ಆಗಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯರವರು ಪತ್ನಿ, ಹಾಗು ನಾಲ್ವರು ಹೆಣ್ಣುಮಕ್ಕಳನ್ನು ಹೊಂದಿದ್ದಾರೆ. ಹಕ್ಕುಪತ್ರ ವಿವಾದಕ್ಕೆ ಸಂಬಂಧ ಪಟ್ಟಂತೆ ದತ್ತಾತ್ರೇಯರವರು ವಿಚಾರಣೆ ಎದುರಿಸುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

*