ಶಿವಮೊಗ್ಗ: ಕಳೆದ ನಾಲ್ಕು ತಿಂಗಳ ಹಿಂದೆ ಬಂದ ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ನಿಂದ ಸೂಕ್ತ ಪರಿಹಾರ ನೀಡಲಾಗುತ್ತದೆ. ಸಂತ್ರಸ್ತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬಾರದು ಎಂದು ತಹಸೀಲ್ದಾರ್ ಗಿರೀಶ್ ಮನವಿ ಮಾಡಿದ್ದಾರೆ. ಕೆಲ ಸಂತ್ರಸ್ತರ ದಾಖಲೆಗಳು ಸರಿ ಇಲ್ಲದಿರುವುದರಿಂದ ಅವರಿಗೆ ಪರಿಹಾರ ಬಂದಿಲ್ಲ. ನಮ್ಮ ಪಕ್ಕದ ಮನೆಯವರಿಗೆ ಪರಿಹಾರ ಬಂದಿದೆ. ಆದರೆ ನಮಗೆ ಪರಿಹಾರ ಬಂದಿಲ್ಲ ಎಂದು ಕೆಲ ಸಂತ್ರಸ್ಥರು ತಿಳಿದುಕೊಂಡಿದ್ದಾರೆ. ಈ ರೀತಿಯ ಸಂತ್ರಸ್ಥರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಂಡರೆ ಪರಿಹಾರ ಸಿಕ್ಕೇ ಸಿಗುತ್ತದೆ. ಅದನ್ನು ಬಿಟ್ಟು ಮಧ್ಯವರ್ತಿಗಳನ್ನು ನಂಬಿ ಮೋಸಹೋಗಬಾರದು. ಸಂತ್ರಸ್ಥರು ನೇರವಾಗಿ ತಮ್ಮ ಕಚೇರಿಗೆ ಆಗಮಿಸಿದರೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡುತ್ತಾರೆ ಎಂದು ತಹಸೀಲ್ದಾರ್ ಗಿರೀಶ್ ತಿಳಿಸಿದ್ದಾರೆ..
https://youtu.be/NmzkuuKwkhI
C News TV Kannada News Online in cnewstv