ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ
ಘಟನೆಯನ್ನು ನ್ಯಾಯಾಂಗ ಮತ್ತು
ಸಿಓಡಿ ತನಿಖೆಗೆ ವಹಿಸಲು ಆದೇಶಿಸ
ಲಾಗಿದೆ ಎಂದು ಮುಖ್ಯ ಮಂತ್ರಿ
ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹೆಲಿಪ್ಯಾಡ್ನಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬಂದವರು ಪ್ರತಿಭಟನೆ ನೆಪದಲ್ಲಿ ಹಿಂಸಾಚಾರ ನಡೆಸಿ ಗಲಭೆಗೆ ಕಾರಣರಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಪೌರತ್ವ
ತಿದ್ದುಪಡಿ ಕಾಯ್ದೆಯ ಬಗ್ಗೆ ತಿಳಿದು
ಕೊಳ್ಳುವ ಪ್ರಯತ್ನ ಮಾಡದೇ ಹಿಂಸಾಚಾರನಡೆಸಲಾಗಿದೆಎಂದುದೂರಿದರು. ಸಾವಯವ ಕೃಷಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ಉತ್ತೇಜನಕ್ಕಾಗಿ ಹಲವು ಯೋಜನೆ ಕೈಗೊಳ್ಳಲಾಗಿದೆ. ಪೊಲೀಸರ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಔರಾದಕ್ಕರ್ ವರದಿ ಜಾರಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
C News TV Kannada News Online in cnewstv