ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ದಿನವಾದ ಇಂದು ಬೆಳಗಿನ ಜಾವದಿಂದಲೇ ಜನ ಜೀವನ ಎಂದಿನಂತಿತ್ತು. ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್ ಸೇವೆ ಎಂದಿನಂತಿತ್ತು. ಆಟೋಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿದ್ದವು. ಅಂಗಡಿ ಮುಂಗಟ್ಟುಗಳು ಎಂದಿನಂತೆಯೇ ತೆರೆದಿದ್ದು ವರ್ತಕರು ವ್ಯಾಪಾರ ಆರಂಭಿಸಿದ್ದಾರೆ. ಒಟ್ಟಾರೆ ಶಿವಮೊಗ್ಗದಲ್ಲಿ ಭಾರತ್ ಬಂದ್ ಎನ್ನುವುದು ಪ್ರತಿಭಟನೆಗಷ್ಟೇ ಸೀಮಿತವಾಗುವ ಸಾಧ್ಯತೆಯಿದೆ.
C News TV Kannada News Online in cnewstv