Breaking News

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ಕಾಮತ್ ಕಾಂಡಿಮೆಂಟ್ಸ್ ಬೆಂಕಿಗಾಹುತಿ

 

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಕಾಮತ್ ಮಂಡಕ್ಕಿ ಅಂಗಡಿಯು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 3.30 ಕ್ಕೆ ಘಟನೆ ನಡೆದ್ದಿದ್ದು, ಅಂಗಡಿ ಮತ್ತು ಮನೆ ಒಂದೇ ಕಡೆ ಇರುವುದರಿಂದ ಸುಮಾರು ಏಳರಿಂದ ಹತ್ತು ಲಕ್ಷ ರೂಪಾಯಿ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

*