Breaking News

ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್ ಸಂಚಾರಿ ಕ್ಯಾಂಟೀನ್ ಆರಂಭ..

 

ಶಿವಮೊಗ್ಗ : ಕರೋನಾ ಹರಡುವ ಭೀತಿಯಿಂದಾಗಿ ಲಾಕ್ ಡೌನ್ ಮಾಡಲಾಗಿದ್ದು, ಇದರಿಂದಾಗಿ ಹೋಟೆಲ್ ಗಳು ಬಾಗಿಲು ಮುಚ್ಚಿವೆ. ಇದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳು, ಆವರ ಸಂಬಂಧಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಆಹಾರವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಆರಂಭದಿಂದ ಬೇರೆಡೆಯಿಂದ ಆಹಾರ ತಂದು ಇವರಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದರು. ಆದರೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಸೇರಿ ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ ಕ್ಯಾಂಟೀನ್ ಆರಂಭಿಸಿ ರೋಗಿಗಳು, ಆವರ ಸಂಬಂಧಿಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಉಚಿತವಾಗಿ ಊಟ ಹಾಗೂ ತಿಂಡಿ ವಿತರಿಸುವ ಕಾರ್ಯವನ್ನು ಇಂದಿನಿಂದ ಆರಂಭಿಸಿದ್ದಾರೆ. ಕಾರ್ಯಕ್ರಮ ಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚಾಲನೆ ನೀಡಿದ್ದರು..

Leave a Reply

Your email address will not be published. Required fields are marked *

*