ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ “ವಿದ್ಯಾರ್ಥಿ ಕೀಟ್” ವಿತರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
2020-2021 ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕಗಳು,ನೋಟ್ ಬುಕ್, ಹಾಗೂ ಅಗತ್ಯ ಶೈಕ್ಷಣಿಕ ವಸ್ತುಗಳನ್ನ ಒಳಗೊಂಡ ಕಿಟ್ ಗಳನ್ನ ವಿತರಿಸಬೇಕು ಹಾಗೂ ಈ ಕಿಟ್ ಗಳಿಗೆ ಶುಲ್ಕ ವಿಧಿಸದೆ ಉಚಿತವಾಗಿ ಹಂಚಬೇಕು ಎಂದು ಆಗ್ರಹಿಸಿದರು. ಮನವಿ ನೀಡುವ ಸಂದರ್ಭದಲ್ಲಿ ಎನ್ ಎಸ್ ಯು ಐ ನ ಜಿಲ್ಲಾಧ್ಯಕ್ಷ ಹೆಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ಮಂಜು, ಭರತ್, ಆಕಾಶ್, ಅಬ್ದುಲ್ ಸತ್ತರ್, ಗಿರೀಶ್ ಉಪಸ್ಥಿತರಿದ್ದರು.
C News TV Kannada News Online in cnewstv