Breaking News

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವ ಪೊಲೀಸರ ವಶಕ್ಕೆ.

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಶ್ರೀ ಚನ್ನಬಸವೇಶ್ವರ ದೇವಾಲದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ನಿನ್ನೆ ತಡರಾತ್ರಿ ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ನಾಲ್ವರು ಕಳ್ಳರು ದೇವಾಲಯದ ಒಳಗೆ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದಾರೆ. ಕೂಡಲೇ‌ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನಾಲ್ವರು ಕಳ್ಳರನ್ನು ಹಿಡಿಯಲು ಹೋಗಿದ್ದಾರೆ. ಆಗ ಮೂವರು ಕಳ್ಳರು ತಪ್ಪಿಸಿಕೊಂಡಿದ್ದು, ಓರ್ವ ಮಾತ್ರ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ಬಳಿಕವಷ್ಟೇ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮಾಹಿತಿ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

*