Breaking News

ತುಂಬಿದ ತುಂಗೆಗೆ ಈಶ್ವರಪ್ಪನವರಿಂದ ಬಾಗೀನ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಇಂದು ತುಂಬಿದ ತುಂಗೆಗೆ ಜಿಲ್ಲಾ ಉಸ್ತುವಾರಿ‌ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬದವರು ತುಂಗಾ ಪೂಜೆ‌ ಸಲ್ಲಿಸಿ ಬಾಗೀನ ಅರ್ಪಿಸಿದರು. ತೀರ್ಥಹಳ್ಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್‌ನಷ್ಟು ನೀರು ಹರಿದು ಬರುತ್ತಿದ್ದು, ಈಗಾಗಲೆ ತುಂಗಾ ಜಲಾಶಯ ಭರ್ತಿಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಜಲಾಶಯದಿಂದ ತುಂಗಾ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಶಿವಮೊಗ್ಗ ನಗರದ‌ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

Leave a Reply

Your email address will not be published. Required fields are marked *

*