ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ ಚೇತನ್ ಕುಮಾರ್ ಮೇಲೆ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
C News TV Kannada News Online in cnewstv