ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಬಿಸಿ ತಟ್ಟಿದೆ. ನಿನ್ನೆ ಕರೋನಾ ತಪಾಸಣೆಗೆ ಈಶ್ವರಪ್ಪ ಒಳಗಾಗಿದ್ದರು. ಈ ತಪಾಸಣೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಈಶ್ವರಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ ಅವರ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಹಾಗೂ ಅವರ ಕುಟುಂಬದವರು ಕರೋನಾ ಟೆಸ್ಟ್ ಗೆ ಒಳಗಾಗಿದ್ದರು. ಈಶ್ವರಪ್ಪ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ಅವರು ನನಗೆ ಕರೋನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನಗೆ ಯಾವುದೇ ರೋಗ ಲಕ್ಷಣಗಳೂ ಇಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ಆಗುವ ಜೊತೆಗೆ ಕರೋನಾ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
- ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ ...
- ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ ...
- ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ.. ...
- ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ ...
- ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು… ...
- ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ...
- ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ...
- ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ...
- ಅಹಂಕಾರದಿಂದ ಚುನಾವಣೆ ನಡೆಸಿದರೆ , ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ.. ...
- ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ. ...
Recent Comments