Breaking News

ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ ಇದೀಗ ಮಠದ ಅಂಗಳಕ್ಕೂ ಕಾಲಿಟ್ಟಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

*