ಶಿವಮೊಗ್ಗ : ಶಿವಮೊಗ್ಗ ದಿಂದ N R ಪುರಕ್ಕೆ ತೆರಳುತ್ತಿದ್ದ ಸೆಲೆರಿಯೋ ಕಾರು ಕಾಚಿನಕಟ್ಟೆಯ ಬಳಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರನ್ನ ಕಟ್ ಮಾಡುವ ಮೂಲಕ ಕಾರಿನಲ್ಲಿದ್ದ ಜನರನ್ನು ಹೊರಗೆ ತೆಗೆಯಲಾಯಿತು. ಇವರನ್ನೆಲ್ಲ ಎನ್ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ. ಆದರೆ ಯಾವುದೇ ನಿಖರವಾದ ಮಾಹಿತಿಗಳು ದೊರೆತಿಲ್ಲ. ತುಂಗಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
C News TV Kannada News Online in cnewstv