Breaking News

ಭದ್ರಾ  ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ಅಧಿಕಾರ ಸ್ವೀಕಾರ

 

ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ರೈತ ಮೋರ್ಚಾದ ಮುಖಂಡೆ ಪವಿತ್ರಾ ರಾಮಯ್ಯ ಅವರು ಅಧಿಕಾರ‌ ಸ್ವೀಕರಿಸಿದರು. ಇಂದು ಮಲವಗೊಪ್ಪದಲ್ಲಿರುವ ಭದ್ರಕಾಡಾ‌ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭದ್ರಕಾಡಾ ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪವಿತ್ರ ರಾಮಯ್ಯ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮಕೈಗೊಳ್ಳಲಾಗುವುದು. ಅಲ್ಲದೆ ಅಚ್ಚುಕಟ್ಟು ಪ್ರದೇಶ ರೈತರ ಸಭೆ ನಡೆಸಿ ರೈತರ ಸಮಸ್ಯೆ ಆಲಿಸಿ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು.

 

Leave a Reply

Your email address will not be published. Required fields are marked *

*