Breaking News

ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೇ ಕದ್ದ ಖದೀಮ.

 

ಶಿವಮೊಗ್ಗ: ಮಾಸ್ಕ ಹಾಕದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹೊಸನಗರ ಠಾಣೆ ಪೊಲೀಸರು ದಂಡ ವಿಧಿಸಿದ್ದರು. ಆದರೆ ದಂಡ ಕಟ್ಟಿದ ಸಿಟ್ಟಿಗೆ ಆತ ಪೊಲೀಸರ ಬೈಕನ್ನೇ ಕದ್ದು ಪರಾರಿಯಾಗಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಚೇತನ್ ಎಂಬಾತ ಮಾಸ್ಕ್ ಹಾಕದೆ ಓಡಾಡುತ್ತಿದ್ದಾಗ ಪೊಲೀಸರು ಆತನನ್ನು ಹೊಸನಗರ ಪೊಲೀಸ್ ಠಾಣೆಗೆ ಕರೆತಂದು ದಂಡ ವಿಧಿಸಿದ್ದಾರೆ. ದಂಡ ಪಾವತಿಸಿ ಹೊರಬಂದ ಚೇತನ್ ಪೊಲೀಸ್ ಠಾಣೆ ಪಕ್ಕದಲ್ಲೇ ನಿಲ್ಲಿಸಿದ್ದ ಪೊಲೀಸ್ ಪೇದೆ‌ ರಾಘವೇಂದ್ರ ಅವರ ಬೈಕ್ ಕದ್ದು ಪರಾರಿಯಾಗಿದ್ದಾನೆ. ಈ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಹೊಸನಗರ ಠಾಣೆ ಪೊಲೀಸರು ಒಂದೇ ದಿನದಲ್ಲಿ ಆರೋಪಿ ಚೇತನನ್ನು ಕುಂದಾಪುರದಲ್ಲಿ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

*