ಶಿವಮೊಗ್ಗ; ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿ ಖೈದಿ ಮಂಜುನಾಥ್ 33 ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ನಿನ್ನೆ ಸಂಜೆ ಜೈಲಿನ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್ ನಿಂದ ಮಂಜು ನೇಣು ಬಿಗಿದುಕೊಂಡಿದ್ದಾನೆ.ತಕ್ಷಣ ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾನೆ ಎನ್ನಲಾಗಿದೆ. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚನಾಮೆ ಶವಪರೀಕ್ಷೆ..ವಿಡಿಯೋ ಚಿತ್ರೀಕರಣ ಮಾಡಲಾಗಿದೆ.ಮೃತ ಕೈದಿ ಮಂಜು ಸಾಗರ ಎಸ್ ಎಸ್ ಕಾಲೊನಿ ನಿವಾಸಿಎಂದು ತಿಳಿದು ಬಂದಿದೆ.
C News TV Kannada News Online in cnewstv