ಶಿವಮೊಗ್ಗ: ದೀಪಾವಳಿ ಹಬ್ಬ ಬೆಳಕಿನ ಹಬ್ಬ. ದೀಪಾವಳಿ ಬಂದರೆ ಸಾಕು ಪಟಾಕಿಗಳ ಸದ್ದು ಎಲ್ಲೆಡೆ ಮಾರ್ದನಿಸುತ್ತಿತ್ತು. ಪಟಾಕಿಗಳು ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಿದ್ದವು. ಆದರೆ ಈ ಬಾರಿ ಕಾಣಿಸಿಕೊಂಡಿರುವ ಮಹಾಮಾರಿ ಕರೋನಾ ದೀಪಾವಳಿ ಸಂಭ್ರಮಕ್ಕೂ ತಣ್ಣೀರೆರಚಿದೆ. ಕರೋನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪಟಾಕಿಯಿಂದ ಬರುವ ಹೊಗೆಯಿಂದಾಗಿ ಕರೋನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಟಾಕಿ ನಿಷೇಧದ ಕುರಿತು ಆದೇಶವನ್ನು ಶೀಘ್ರವೇ ಹೊರಡಿಸುವುದಾಗಿ ಸಿಎಂ ತಿಳಿಸಿದ್ದಾರೆ.
- ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ.. ...
- ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ ...
- ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು… ...
- ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ...
- ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ...
- ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ...
- ಅಹಂಕಾರದಿಂದ ಚುನಾವಣೆ ನಡೆಸಿದರೆ , ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ.. ...
- ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ. ...
- ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್. ...
- ಶಿವಮೊಗ್ಗ ಲೋಕ ಸಭಾ ಚುನಾವಣೆ : ಈ 10 ಜನರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲು ಶಿಫಾರಸು ಪತ್ರ.. ...
Recent Comments