ಶಿವಮೊಗ್ಗ : ಹಾಡುಹಗಲೇ ರೌಡಿಶೀಟರ್ ಮಂಜುನಾಥ್ (30) ನನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಸವನಗುಡಿ 5ನೇ ತಿರುವಿನಲ್ಲಿ ಇಂದು ಮಧ್ಯಾಹ್ನ ಮಂಜುನಾಥ್ ನಡೆದುಕೊಂಡು ಹೋಗುತ್ತಿದ್ದಾಗ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಮಂಜುನಾಥ್ ನನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ ಪಿ ಶಾಂತರಾಜು ಭೇಟಿ ನೀಡಿದರು.
C News TV Kannada News Online in cnewstv