Breaking News

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಸಂಸದ ಬಿ.ವೈ.ರಾಘವೇಂದ್ರ

ದಿಶಾ ಸಮಿತಿ ಸಭೆ

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಗ್ರಾಮ ಜ್ಯೋತಿ ಯೋಜನೆ: ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಟಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಸದರು ಸೂಚಿಸಿದರು. ಮೆಸ್ಕಾಂ ಕುರಿತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೆಸ್ಕಾಂ ಎಂಡಿಯವರನ್ನು ಜಿಲ್ಲೆಗೆ ಕರೆಯಿಸಿ ಸಭೆ ನಡೆಸಲಾಗುವುದು ಎಂದರು.

ಪಿಎAಜಿಎಸ್‌ವೈ: ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆ: ಜಿಲ್ಲೆಯಲ್ಲಿ ಎನ್‌ಆರ್‌ಇಜಿ ಅಡಿ ಪ್ರಸ್ತುತ ವರ್ಷ 45ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 32ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಯೋಜನೆಯಡಿ ಈಗಾಗಲೇ ಅಡಿಕೆ, ಬಾಳೆ, ಕರಿಮೆಣಸು, ನುಗ್ಗೆ, ಹಣ್ಣಿನ ಬೆಳೆಗಳ ಕೃಷಿಯನ್ನು ಸೇರಿಸಲಾಗಿದೆ. ಭತ್ತ ನಾಟಿ ಮಾಡುವಿಕೆ ಸೇರಿದಂತೆ ಮಲೆನಾಡಿನ ಕೃಷಿ ಚಟುವಟಿಕೆಗಳನ್ನು ಈ ಯೋಜನೆಯಡಿ ಸೇರಿಸುವ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅವರು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5085ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1612ಮನೆಗಳಿಗೆ ಅನುಮೋದನೆ ದೊರೆತಿದ್ದು 658ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48ಕೋಟ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಟಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾAತರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ತಾಲೂಕು ಪಂಚಾಯತ್ ಅಧ್ಯಕ್ಷರು, ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments