Breaking News

ಕ್ಯಾಂಟರ್ ಪಲ್ಟಿ, ಗೋವುಗಳ ಸಾವು

ಶಿವಮೊಗ್ಗ: ಗೋವುಗಳನ್ನು ಸಾಗಿಸುತ್ತಿದರೆ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಎಂಟು ಎತ್ತು ಹಾಗೂ ಎಮ್ಮೆಗಳು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಇಂದು ಮುಂಜಾನೆ ನಡೆದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಕಾರ್ಯಾಚರಣೆ ನಡೆಸಿ ಆರು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ಕ್ಯಾಂಟರ್ ನಲ್ಲಿ ಗೋವುಗಳನ್ನು ಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಘಟನೆಯಲ್ಲಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

*