ಶಿವಮೊಗ್ಗ : ರೈತಸಂಘಟನೆಗಳ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದು ರೈತಸಂಘದ ರಾಜ್ಯ ಕಾರ್ಯದ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ರೈತಸಂಘಟನೆಗಳು ಕಳೆದ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದು, ಅವರ ಬೆಂಬಲಕ್ಕೆ ಸುಪ್ರೀಂ ಕೋರ್ಟ್ ನಿಂತಿರುವುದು ರೈತರಿಗೆ ಸಿಕ್ಕ ಜಯ. ಕೇಂದ್ರ ಸರ್ಕಾರ ಈಗಾದರೂ ಜನರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಅರಿತು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಜೊತೆಗೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕಾಯ್ದೆಗಳನ್ನು ಅಮಾನತಿಲ್ಲಿಟ್ಟು, ಸಮಿತಿ ರಚನೆ ಮಾಡಿ, ಸಾಧಕ-ಭಾಧಕಗಳನ್ನು ಚರ್ಚಿಸುವಂತೆ ಸಲಹೆ ನೀಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಬೇಕು ಎಂದು ರೈತಸಂಘದ ಹೆಚ್.ಆರ್.ಬಸವರಾಜಪ್ಪ ಒತ್ತಾಯಿಸಿದ್ದಾರೆ.
C News TV Kannada News Online in cnewstv