ರೈಲ್ವೆ ಕ್ರಷರ್ ಬ್ಲಾಸ್ಟ್‌ : ಬಿಹಾರ ಮೂಲದ 6 ಕಾರ್ಮಿಕರ‌ ಸಾವು

 

ಶಿವಮೊಗ್ಗ : ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್ ಸ್ಪೋಟದ ಪರಿಣಾಮ ಜಿಲ್ಲೆಯಲ್ಲಿ ಭಾರೀ ಶಬ್ದ ಹಾಗೂ ಕಂಪನ ಸಂಭವಿಸಿದೆ ಎನ್ನಲಾಗುತ್ತಿದೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಎಂಬಲ್ಲಿ ರೈಲ್ವೆ ಕ್ವಾರಿಯಲ್ಲಿ ಭಾರೀ ಸ್ಪೋಟ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಘಟನೆ ಸಂಭವಿಸಿದ್ದು, ದಟ್ಟ ವಾಸನೆ ಆವರಿಸಿದೆ.‌ ಘಟನೆಯಲ್ಲಿ ಬಿಹಾರ ಮೂಲದ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸ್ಪೋಟದ ತೀವ್ರತೆಗೆ ಲಾರಿ ಸಂಪೂರ್ಣ ಛಿದ್ರಛಿದ್ರವಾಗಿದೆ. ಸ್ಧಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ದೌಡಾಯಿಸಿದ್ದಾರೆ.

 

Leave a Reply

Your email address will not be published. Required fields are marked *

*