Breaking News

ಮಾರ್ಚ್ 5 ರವರೆಗೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ

ಕನಕ ಮಂಟಪದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಮಾರಾಮಾರಿ ನಡೆದಿದ್ದು, ತದನಂತರದ ಬೆಳವಣಿಗೆಯಲ್ಲಿ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಡದಂತೆ ಮುಂಜಾಗೃತ ಕ್ರಮದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಸೆಕ್ಷನ್‌144 ನ್ನ ಜಾರಿಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಐದು ಎಫ್ಐಆರ್ ಆಗಿದ್ದು ಇದಕ್ಕೆ ಕೌಂಟರ್ ಆಗಿಯೂ ದೂರು ದಾಖಲಾಗಿದೆ. ಬಿಜೆಪಿಯಿಂದ ಪ್ರತಿಭಟನೆ, ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆಗಳು ನಡೆದ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯ ವರದಿಯ ಆಧಾರದ ಮೇರೆಗೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಭದ್ರಾವತಿಯ ತಹಶೀಲ್ದಾರ್ ಸಂತೋಷ್ ಕುಮಾರ್‌.ಜಿ ಆದೇಶಿಸಿದ್ದಾರೆ.

ಐದು ಜನರಿಗಿಂತ ಅಥವಾ ಐದಕ್ಕಿಂತ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಮೆರವಣಿಗೆ, ಸಭೆ ಸಮಾರಂಭವನ್ನ ನಡೆಸದಂತೆ ನಿರ್ಬಂಧಿಸಲಾಗಿದೆ. ಮಾರಕಾಸ್ತ್ರಗಳು ಹಾಗೂ ಇತರೆ ಆಯುಧಗಳ ಸಂಗ್ರಹಣೆ ಮತ್ತು ಸಾಗಿಸುವುದನ್ನ ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಪ್ರಚೋದಿಸುವ ಬಹಿರಂಗ ಘೋಷಣೆಗಳನ್ನ ಕೂಗುವುದು, ಸನ್ನೆ ಮಾಡುವುದು, ಸಂಗೀತ ನುಡಿಸುವುದಕ್ಕೂ ಬ್ರೇಕ್ ಹಾಕಲಾಗಿದೆ. ಹೀಗೆ 9 ಅಂಶಗಳನ್ನ ನಿರ್ಬಂಧಿಸಿ ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments