Breaking News

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ : ಜನರಲ್ಲಿ ಜಾಗೃತಿ ಮೂಡಿಸಿದ ಮೇಯರ್ ಸುನಿತಾ ಅಣ್ಣಪ್ಪ.

 

ಶಿವಮೊಗ್ಗ : ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದು ಮಹಾನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಉಪಮೇಯರ್ ಶಂಕರ್ ಗನ್ನಿಯವರು ಜನರಲ್ಲಿ ಜಾಗೃತಿ ಮೂಡಿಸಿದರು.

ನಗರದ ಶಿವಪ್ಪ ನಾಯಕ ವೃತ್ತ, ಗಾಂಧಿಬಜಾರ್ ಸೇರಿದಂತೆ ಪ್ರಮುಖ ವ್ಯಾಪಾರ ಕೇಂದ್ರಗಳಲ್ಲಿ ಸಂಚರಿಸಿ ಮಾಸ್ಕ್ ಹಾಕುವುದು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ವ್ಯಾಪಾರಸ್ಥರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

*