Breaking News

18 ವರ್ಷ ಮೇಲ್ಪಟ್ಟವರಿಗೆ ಶೀಘ್ರ ಲಸಿಕೆ ನೀಡಿ: ಕೆ.ಚೇತನ್

 

18 ವರ್ಷ ಮೇಲ್ಪಟ್ಟವರಿಗೆ ಶ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಕೊರೊನಾ 2ನೇ ಅಲೆಗೆ ಯುವಕರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಪ್ರಮುಖ ಕಾರಣ. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿರುವುದು ಏಕೆ ಎಂಬುದನ್ನು ಚೇತನ್ ಪ್ರಶ್ನಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ, ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ 18 ವರ್ಷ ಮೇಲ್ಲಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ ಎಂದು ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.

ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುತ್ತಿದ್ದಾರೆ. ಇನ್ನಾದರೂ ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇಲ್ಲವೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ರಾಜ್ಯ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಸಂಘಟನೆಗಳು ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿವೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗುತ್ತಿದ್ದಾರೆ. ಮುಂದೆಯೂ ಜನರ ನೆರವಿಗೆ ಬರಲು ಹಾಗೂ ಕೊರೊನಾ ಸೋಂಕು ತಡೆಗಟ್ಟಲು ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments