Breaking News

ಲಾಕ್ ಡೌನ್ ಎಫೆಕ್ಟ್, ಸಂಕಷ್ಟದಲ್ಲಿ ಕುಕ್ಕುಟೋದ್ಯಮ

 

Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ: ಲಾಕ್‌ಡೌನ್‌ನಿಂದ ಕೋಳಿ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು ಕೋಳಿ ಸಾಕಣೆದಾರರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಚಿಕನ್‌ ಮಾರಾಟ ಅವಧಿ ಹೆಚ್ಚಿಸಿ ರೈತರು, ಮಾರಾಟಗಾರರ ರಕ್ಷಣೆಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ನಿಗದಿ ಮಾಡಿರುವ ಕಾರಣ ಕೋಳಿ ಮಾರಾಟದಲ್ಲಿ ಇಳಿಕೆ ಕಂಡ ಪರಿಣಾಮ ರಿಟೈಲ್‌ದಾರರು ಕಡಿಮೆ ಬೆಲೆಗೆ ಕೋಳಿ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಆದರೆ ಮಾರಾಟ ಬೆಲೆಯಲ್ಲಿ ಕಡಿಮೆಯಾಗಿಲ್ಲ. 2020ರ ಮಾರ್ಚ್‌ನಲ್ಲಿ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಲಾಯಿತು. ಈವೇಳೆ ಚಿಕನ್ ಮೇಲಿನ ವದಂತಿ, ಹಕ್ಕಜರ ಭೀತಿ, ಮಾರಾಟಕ್ಕೆ ಅವಕಾಶವೇ ಇಲ್ಲದ ಕಾರಣ ಕೋಳಿ ಸಾಕಣೆದಾರ ರೈತರು ಲಕ್ಷಾಂತರ ಕೋಳಿಗಳನ್ನು ಜೀವಂತ ಹೂತು ಕೋಟಿ ಕೋಟಿ ನಷ್ಟಮಾಡಿಕೊಂಡರು. ಇಂತಹ ಕಹಿ ಘಟನೆಯಿಂದ ಹೊರಬರುವ ಮುನ್ನವೇ ಮತ್ತೆ ಲಾಕ್‌ಡೌನ್ ಎಫೆಕ್ಟ್ ಕಾಡುತ್ತಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ 10 ಗಂಟೆವರೆಗೂ ಚಿಕನ್ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಂಪೂರ್ಣ ಲಾಕ್‌ಡೌನ್ ಇರುವ ಕಡೆ ಅದೂ ಇಲ್ಲ. ಈ ಅವಯಲ್ಲಿ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡುವ ಹಾಗೂ ಕಷ್ಟದ ಸಮಯದಲ್ಲಿ ಹಣ ಖರ್ಚು ಮಾಡಲು ಜನ ಹಿಂದುಮುಂದು ನೋಡುತ್ತಿದ್ದಾರೆ. ಇದರಿಂದ ಒಟ್ಟಾರೆ ಕೋಳಿ ಮಾರಾಟ, ಸೇವನೆಯಲ್ಲಿ ಶೇ.60ರಷ್ಟು ಕುಸಿತ ಕಂಡಿದೆ.

ಒಂದು ಕೆ.ಜಿ ಕೋಳಿ ಉತ್ಪಾದನೆಗೆ (40ರಿಂದ 45 ದಿನ) ಮರಿ, ಆಹಾರ, ಸಿಬ್ಬಂದಿ ಖರ್ಚು ಸೇರಿ 90 ರೂ. ಆಗುತ್ತದೆ. ಪ್ರಸ್ತುತ ಹೋಲ್‌ಸೇಲ್ ಬೆಲೆ ಪ್ರತಿ ಕೆ.ಜಿಗೆ 40ರಿಂದ 45 ರೂ. ಇದೆ. ಚಿಕನ್ ಶಾಪ್‌ಗಳಲ್ಲಿ ಕೆ.ಜಿ 140ರಿಂದ, 160 ರೂ.ವರೆಗೂ ಇದೆ. ಕಟಾವಿಗೆ ಬಂದ ಕೋಳಿಯನ್ನು ಹೆಚ್ಚೆಂದರೆ ಒಂದು ವಾರ ಇಟ್ಟುಕೊಳ್ಳಬಹುದು ಆಮೇಲೆ ಅದು ಆಹಾರವನ್ನು ದುಪ್ಪಟ್ಟು ಸೇವಿಸುತ್ತದೆ. ತೂಕ ಕೂಡ ಹೆಚ್ಚಾಗುವುದಿಲ್ಲ. ಇದೇ ಕಾರಣಕ್ಕೆ ಕೇಳಿದ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಕೋಳಿ ಸಾಕಣೆದಾರರಾದ ದಿನೇಶ್ ಪಟೇಲ್ ರವರು ಸಿ ನ್ಯೂಸ್‌ ನೊಂದಿಗೆ ಮಾತನಾಡಿ, “ಕೋಳಿ ಮಾರಾಟ ಅವಧಿಯನ್ನು ಹೆಚ್ಚಿಸಿದರೆ ಸಾಕಣೆದಾರರಿಗೂ, ಮಾರಾಟಗಾರರೂ ಬದುಕುಬಹುದು. ಸರಕಾರ ನಮಗೆ ಪರಿಹಾರ ಕೊಡುವುದು ಬೇಡ. ಈಗಿರುವ 10 ಗಂಟೆ ಅವಧಿಯನ್ನು ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸಿದರೆ ಸಾಕು. ಕಳೆದ ಬಾರಿಯಂತೆ ಕೋಳಿಯನ್ನು ಹೂಳುವ ಮೊದಲು ಸರಕಾರ ಎಚ್ಚೆತ್ತುಕೊಂಡು ಸಮಯ ವಿಸ್ತರಿಸಲಿ ಎಂದರು.”

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments