Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ಕಿಟ್ ಹಂಚುವ ಸಂದರ್ಭದಲ್ಲಿ ಅಪಘಾತವಾಗಿದೆ ಎನ್ನಲಾಗುತ್ತಿದೆ. ಸಧ್ಯ ಸಂಚಾರಿ ವಿಜಯ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv