Breaking News

ಜಿಲ್ಲೆಯಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 13.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‍ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*