Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೋವಿಡ್ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಇಂದು ಮಹಾನಗರ ಪಾಲಿಕೆ ವತಿಯಿಂದ ಕರೋನಾದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು 46460 ಆಹಾರ ಕಿಟ್ ನೀಡುವ ಮಹತ್ತರ ಕಾರ್ಯವನ್ನು ಕೈಗೊಳ್ಳಲಾಗಿದೆ. ಪ್ರತಿ ವಾರ್ಡ್ನಲ್ಲಿ ಒಂದು ಸಾವಿರಕ್ಕೂ ಅಧಿಕ ಕಿಟ್ ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ವ್ಯಕ್ತಿಯ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡಿರುವ ಈ ಕಾರ್ಯ ಇತರ ಸ್ಥಳೀಯ ಸಂಸ್ಥೆಗಳಿಗೂ ಮಾದರಿಯಾಗಲಿ ಎಂದು ಅವರು ಹಾರೈಸಿದರು.
ಈಗಾಗಲೇ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ಲಸಿಕೆ ಹಾಕುವ ಕಾರ್ಯವನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಒಂದೇ ದಿನ ಲಕ್ಷಾಂತರ ಮಂದಿಗೆ ಲಸಿಕೆ ಹಾಕಿರುವುದು ದಾಖಲೆಯಾಗಿದೆ. ಇದೇ ರೀತಿ ನವೆಂಬರ್ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಉಚಿತವಾಗಿ ಪಡಿತರವನ್ನು ಪೂರೈಕೆ ಮಾಡುತ್ತಿದೆ. ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಸದಸ್ಯರ ವಾರೀಸುದಾರರಿಗೆ ಒಂದು ಲಕ್ಷ ರೂ. ಪರಿಹಾರ ನೀಡುತ್ತಿರುವುದು ದೇಶದಲ್ಲೇ ಪ್ರಥಮವಾಗಿದೆ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರದೊಂದಿಗೆ ಹಲವು ಸಂಘ ಸಂಸ್ಥೆಗಳು, ಮಠಗಳು ಮುಂದೆ ಬಂದಿದ್ದು, ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಿವೆ. ಅಂತ್ಯಸAಸ್ಕಾರವನ್ನು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಂದೆ ನಿಂತು ನೆರವೇರಿಸಿದ್ದಾರೆ. ಇದೀಗ ಮೂರನೇ ಅಲೆಯ ಬಗ್ಗೆ ಹೇಳಲಾಗುತ್ತಿದ್ದು, ಸರ್ಕಾರ ಅದನ್ನು ಎದುರಿಸಲು ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್ಗೆ ಯಾರೂ ಹೆದರುವ ಅಗತ್ಯವಿಲ್ಲ. ಆದರೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಪ್ರತಿಯೊಬ್ಬರೂ ಕಾಯ್ದುಕೊಳ್ಳುವಂತೆ ಅವರು ಮನವಿ ಮಾಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv