Cnewstv.in / 05.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ ಡೌನ್ ನನ್ನು ಸಡಿಲಿಕೆ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಂದ್ ಅಗಿದ್ದ ದೇವಸ್ಥಾನಗಳಲ್ಲಿ ಇಂದಿನಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅನುವುಮಾಡಿಕೊಡಲಾಗಿದೆ.
ನಗರದ ಪ್ರಮುಖ ದೇವಾಲಯಗಳಾದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಾಲಯ, ಮಾರಿಕಾಂಬ ದೇವಸ್ಥಾನ, ಶಿವಾಲಯ, ಸಾಯಿಬಾಬಾ ಮಂದಿರ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳಲ್ಲಿ ಪೂಜೆಗೆ ಮಾತ್ರ ಅವಕಾಶವಿದ್ದು, ತೀರ್ಥ – ಪ್ರಸಾದ ವಿತರಣೆಗೆ ಅವಕಾಶವಿಲ್ಲ.
ಇದನ್ನು ಒದಿ : https://cnewstv.in/?p=5080
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments