Breaking News

ಬಿ.ಎಸ್. ವೈ ಬದಲಾವಣೆ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ – ಎಸ್ ರುದ್ರೇಗೌಡ

Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ. ಆದರೆ ಇದು ಬರಿ ವದಂತಿ ಮಾತ್ರ, ಬಿ.ಎಸ್ ಯಡಿಯೂರಪ್ಪನವರು ಮಾಸ್ ಲೀಡರ್. ತಮ್ಮ ಆಡಳಿತದಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಎಲ್ಲಿಯೂ ಚ್ಯುತಿ ಬರದಂತೆ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬದಲಾವಣೆಯ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರೇಗೌಡ ಅವರು ತಿಳಿಸಿದ್ದಾರೆ.

ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗಿನಿಂದಲೂ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಇನ್ನು ಎರಡು ವರ್ಷ ಬಿಎಸ್ ಯಡಿಯೂರಪ್ಪನವರ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಈ ಬಗ್ಗೆ ಯಾವುದೇ ಸಂಶಯ ಬೇಡ. ಈ ವದಂತಿಯ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರು ಸ್ಪಷ್ಟನೆ ನೀಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಒದಿ : https://cnewstv.in/?p=5181

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*