Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಗುತ್ತಿದೆ.
ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ ಮೂಲಕ ಯುವ ಜನತೆಯ ಸ್ವಾಭಿಮಾನ ಕೆಣಕಿದ್ದರು.
ಇದನ್ನು ಒದಿ : https://cnewstv.in/?p=6001
ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಮುಚ್ಚುತ್ತಾ ಉದ್ಯೋಗಿಗಳನ್ನೂ ನಿರುದ್ಯೋಗಿಗಳನ್ನಾಗಿ ಮಾಡಲಾಗುತ್ತಿದೆ. ಕೋಟ್ಯಂತರ ಪದವೀಧರರು, ಸ್ನಾತಕೋತ್ತರ ಪದವೀಧರರು, ತಾಂತ್ರಿಕ ಪದವಿ ಪಡೆದವರು ಉದ್ಯೋಗವಿಲ್ಲದೇ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಇಂದು ‘ಮೋದಿ ಹಠಾವೋ ಉದ್ಯೋಗ್ ಬಚಾವೋ’ ಎಂಬ ಘೋಷಣೆಯೊಂದಿಗೆ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ ,ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ್ರು,ಅಲ್ಪಸಂಖ್ಯಾತ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್, ನಿಯಾಲ್ ,ಮುಜೀಬ್ ,ಫೈರೋಜ್ ,ಅಕ್ಬರ್ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್,ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಗಿರೀಶ್ ,ಯುವ ಕಾಂಗ್ರೆಸ್ ನ ಮುಖಂಡರಾದ ಮಧುಸೂದನ್ ,ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ವಿನಯ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಗಿರೀಶ್ , ಸುರೇಶ್,ಪುರಲೆ ಮಂಜು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv