Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಭದ್ರಾವತಿಯ ಮಾಜಿ ಶಾಸಕ, ಜನಪ್ರಿಯ ನಾಯಕ ದಿ. ಅಪ್ಪಾಜಿ ಗೌಡರ ಪುತ್ಥಳಿಯನ್ನು ಇಂದು ಅನಾವರಣ ಮಾಡಲಾಯಿತು.
ಅಪ್ಪಾಜಿ ಗೌಡರ ಸಮಾಧಿ ಇರುವ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಇಂದು ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು
ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.
ಕುರ್ಚಿಯ ಮೇಲೆ ಕೂತಿರುವ ಹಾಗೆ ಅಪ್ಪಾಜಿ ಗೌಡರ ಮೂರ್ತಿಯನ್ನು ಸ್ಥಾಪಿಸಲಾಗಿದ್ದು, ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬಸವಕೇಂದ್ರದ ಶ್ರೀ ಮರುಳಸಿದ್ಧ ಮಹಾಸ್ವಾಮಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಹಾಗೂ ಹಲವು ಪ್ರಮುಖ ನಾಯಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=6149
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv