Cnewstv.in / 28.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಸಿಂದಗಿ ಮತ್ತುಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ರಾಷ್ಟ್ರೀಯ ಚುನಾವಣಾ ಆಯೋಗ ನಿಗದಿ ಮಾಡಿದೆ.
ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ ಮನಗಳಿ ಹಾಗೂ ಹಾನಗಲ್ ಕ್ಷೇತ್ರದ ಶಾಸಕ ಸಿಎಂ ಉದಾಸಿಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ.
ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನಾಂಕ. ಅ.11 ನಾಮಪತ್ರ ಪರಿಶೀಲನೆ, ಅ.13 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.
ಇದನ್ನು ಓದಿ : https://cnewstv.in/?p=6244
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv