Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ರವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಬಸ್ ನಿಲ್ದಾಣ ಹಾಗೂ ಹಲವು ಭಾಗಗಳಲ್ಲಿ ರಾತ್ರಿ 12 ಗಂಟೆಕ್ಕೆ ವಯೋವೃದ್ಧರಿಗೆ ಹಾಗೂ ಬಸ್ ನಿಲ್ದಾಣದ ಕಟ್ಟೆಗಳ ಮೇಲೆ ಮಲಗಿರುವ ನಿರ್ಗತಿಕರಿಗೆ ಹೊದಿಕೆ ವಿತರಣೆ ಮಾಡುವ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮರೇಶ್ , ಗ್ರಾಮಂತರ ಯುವ ಕಾಂಗ್ರೆಸ್ ನ ವೆಂಕಟೇಶ್ ಕಲ್ಲೂರು, NTUC ವಿದ್ಯಾರ್ಥಿ ಘಟಕದ ಅಧ್ಯಕ್ಷ ಪಿ.ಅರ್ಜುನ್, ರಾಕೇಶ್ , ಕೆ.ಎಲ್. ಪವನ್ , ಸುಹಾಸ್ ಗೌಡ , ದೀಪಕ್ , ಚಿನ್ಮಯ್ ಉಪಾಧ್ಯ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಓದಿ : https://cnewstv.in/?p=6318
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv